Vidyasiri Scholarship 2025 Apply: 10ನೇ ತರಗತಿ ಪಾಸಾದಂತ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ.! 20000 ವರೆಗೆ ಹಣ ಪಡೆಯಿರಿ
ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಹತ್ತನೇ ತರಗತಿ ನಂತರ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ ಹೌದು ಸ್ನೇಹಿತರೆ ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಕುರಿತು ಮಾತನಾಡುವ ಸಂದರ್ಭದಲ್ಲಿ ಇನ್ನು ಮುಂದೆ ಹಿಂದುಳಿದ ವರ್ಗಗಳ ಕಲ್ಯಾಣ ಅಡಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಹಾಗೂ ಮಡಿವಾಳ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ 20,000 ವರ್ಷಕ್ಕೆ ಹಣ ನೀಡಲಾಗುತ್ತೆ ಎಂದು ಘೋಷಣೆ ಮಾಡಿದ್ದಾರೆ.!
ಬಂತು ನೋಡಿ ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆಯ ಹೊಸ ದಿನಾಂಕ ಹಾಗೂ ಹೊಸ ಲಿಂಕ್ ಇಲ್ಲಿದೆ ನೋಡಿ ವಿವರ
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಮಡಿವಾಳ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಇತರ ಬಡವರ್ಗದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,500 ಯಂತೆ ವರ್ಷಕ್ಕೆ 15000 ಹಣವನ್ನು ಈ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿತ್ತು ಆದರೆ ಇದೀಗ ಈ ಹಣವನ್ನು ಹೆಚ್ಚಳ ಮಾಡುವುದರ ಕುರಿತು ಸಿಎಂ ಸಿದ್ದರಾಮಯ್ಯನವರು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ ಹಾಗಾಗಿ ಈ ಒಂದು ಲೇಖನ ಮೂಲಕ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ
ವಿದ್ಯಾಸಿರಿ ವಿದ್ಯಾರ್ಥಿ ವೇತನ (Vidyasiri Scholarship 2025 Apply).?
ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಬಡ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ ವಿದ್ಯಾಸಿರಿ ವಿದ್ಯಾರ್ಥಿ ವೇತನ ಅಥವಾ ಸ್ಕಾಲರ್ಶಿಪ್ ಜಾರಿಗೆ ತಂದಿದೆ ಈ ಒಂದು ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 1,500 ರೂಪಯಂತೆ ವರ್ಷಕ್ಕೆ 10 ತಿಂಗಳಿಗೆ 15000 ಹಣವನ್ನು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೆಚ್ಚ ಹಾಗೂ ವಸತಿ ಮತ್ತು ಆಹಾರ ಸೌಲಭ್ಯ ಮುಂತಾದ ಖರ್ಚು ವೆಚ್ಚಗಳಿಗೆ ಸ್ಕಾಲರ್ಶಿಪ್ ಮೂಲಕ ಆರ್ಥಿಕ ನೆರವು ನೀಡುತ್ತಾ ಬಂದಿದೆ

ಇದರಿಂದ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಇರುವ ಖರ್ಚು ವೆಚ್ಚ ಹಾಗೂ ಶಾಲಾ ಶುಲ್ಕ ಮತ್ತು ಶೈಕ್ಷಣಿಕ ವೆಚ್ಚ ಹಾಗೂ ಇತರ ಉದ್ದೇಶಗಳಿಗೆ ಈ ಹಣವನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಲು ನೆರವು ಆಗುತ್ತದೆ ಹಾಗಾಗಿ ಇದೀಗ ರಾಜ್ಯ ಸರ್ಕಾರ ಈ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಬರುವಂತ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ವರ್ಷಕ್ಕೆ 20000 ರಾಜ್ಯ ಸರ್ಕಾರ ನೀಡಲು ಮುಂದಾಗಿದೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ
ಹೌದು ಸ್ನೇಹಿತರೆ, ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಮಡಿವಾಳ ಸಮಾಜಕ್ಕೆ ಸೇರಿದ ವಿದ್ಯಾರ್ಥಿಗಳು ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವಂತ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ವರ್ಷಕ್ಕೆ 20,000 ಹಣವನ್ನು ಸ್ಕಾಲರ್ಶಿಪ್ ಮೂಲಕ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಹಾಗಾಗಿ ವಿದ್ಯಾರ್ಥಿಗಳಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು ಆದ್ದರಿಂದ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ವಿದ್ಯಾಸಿರಿ ಸ್ಕಾಲರ್ಶಿಪ್ (Vidyasiri Scholarship 2025 Apply) ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ವಿದ್ಯಾಸಿರಿ ಸ್ಕಾಲರ್ಶಿಪ್ ಮೂಲಕ 20,000 ಹಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ನಮ್ಮ ಕರ್ನಾಟಕದ ನಿವಾಸಿಗಳಾಗಿರಬೇಕು ಹಾಗೂ ಕರ್ನಾಟಕದಲ್ಲಿ ವಾಸ ಮಾಡುತ್ತಿರಬೇಕು
- ಈ ಸ್ಕಾಲರ್ಶಿಪ್ ಮೂಲಕ ಹಣ ಪಡೆಯಲು ವಿದ್ಯಾರ್ಥಿಗಳು ಹಿಂದಿನ ತರಗತಿಯಲ್ಲಿ ಕನಿಷ್ಠ 40% ಗಿಂತ ಹೆಚ್ಚಿನ ಅಂಕ ಪಡೆದಿರಬೇಕು.
- ಈ ಸ್ಕಾಲರ್ಶಿಪ್ ಮೂಲಕ 20,000 ಹಣ ಪಡೆಯಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರಬೇಕು
- ಈ ಸ್ಕಾಲರ್ಶಿಪ್ ಮೂಲಕ 20,000 ಪಡೆಯಲು ಬಯಸುವ ವಿದ್ಯಾರ್ಥಿಗಳು ಗ್ರಾಮೀಣ ಅಥವಾ ನಗರ ಅಥವಾ ಪಟ್ಟಣದಲ್ಲಿ ವಾಸ ಮಾಡುತ್ತಿದ್ದರೆ ಕನಿಷ್ಠ ಕಾಲೇಜಿನಿಂದ 5 km ದೂರದಲ್ಲಿ ಅಧ್ಯಯನ ಮಾಡುತ್ತಿರಬೇಕು ಅಂತ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
- ಈ ಸ್ಕಾಲರ್ಶಿಪ್ ಯೋಜನೆಗೆ ಪ್ರಸ್ತುತ ಹತ್ತನೇ ತರಗತಿ ಪಾಸಾದ ನಂತರ ಯಾವುದೇ ತರಗತಿ ಅಧ್ಯಯನ ಮಾಡುತ್ತಿದ್ದರೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
ಅರ್ಜಿ ಸಲ್ಲಿಸಲು (documents) ಬೇಕಾಗುವ ಅಗತ್ಯ (Vidyasiri) ದಾಖಲಾತಿಗಳ (information) ವಿವರ..?
- ವಿದ್ಯಾರ್ಥಿಯ ಇಂದಿನ ಎಲ್ಲಾ ತರಗತಿ ಅಂಕಪಟ್ಟಿಗಳು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ವಿದ್ಯಾರ್ಥಿಯ ಪೋಷಕರ ಆಧಾರ್ ಕಾರ್ಡ್
- ಪ್ರವೇಶ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲಾತಿಗಳು
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ (Vidyasiri Scholarship 2025 Apply) ಅರ್ಜಿ ಸಲ್ಲಿಸುವುದು ಹೇಗೆ..?
ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಸ್ತುತ 10ನೇ ತರಗತಿ ಅಥವಾ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದು ಅಥವಾ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ SSP ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನ ಕುರಿತು ಅಥವಾ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಅಥವಾ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ನೀವು ಬಯಸುತ್ತಿದ್ದಾರೆ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು